Notice: Function _load_textdomain_just_in_time was called incorrectly. Translation loading for the disable-gutenberg domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/dinavanissh/webapps/dinavani/wp-includes/functions.php on line 6121

Notice: Function _load_textdomain_just_in_time was called incorrectly. Translation loading for the font-size-change domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/dinavanissh/webapps/dinavani/wp-includes/functions.php on line 6121

Notice: Function _load_textdomain_just_in_time was called incorrectly. Translation loading for the super-progressive-web-apps domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/dinavanissh/webapps/dinavani/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wpreactions-lite domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/dinavanissh/webapps/dinavani/wp-includes/functions.php on line 6121
ಅವೈಜ್ಞಾನಿಕ ಬಿಪಿಎಲ್ ಕಾರ್ಡ ರದ್ದು ಹಗರಣಗಳ ಮುಚ್ಚಿಹಾಕಲು ಸರ್ಕಸ್ :ಗುತ್ತೇದಾರ – Dinavani
ಜಿಲ್ಲೆರಾಜಕೀಯ

ಅವೈಜ್ಞಾನಿಕ ಬಿಪಿಎಲ್ ಕಾರ್ಡ ರದ್ದು ಹಗರಣಗಳ ಮುಚ್ಚಿಹಾಕಲು ಸರ್ಕಸ್ :ಗುತ್ತೇದಾರ

ಕಲಬುರಗಿ : ಬಿಪಿಎಲ್ ಕಾರ್ಡ್ ರದ್ದತಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಅವೈಜ್ಞಾನಿಕ ನೀತಿ ಅನುಸರಿಸುತ್ತಿದೆ ಎಂದು ಜೆಡಿಎಸ್ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಕಾಂಗ್ರೆಸ್ ಸರಕಾರವು ಜನತೆಗೆ ಗ್ಯಾರಂಟಿಗಳ ಆಸೆ ತೋರಿಸಿ ಗೆದ್ದ ನಂತರ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ.ಜನರನ್ನು ಉದ್ದಾರ ಮಾಡೋದು ಬಿಟ್ಟು ಹಗರಣದಲ್ಲಿ ಮುಳುಗಿ ಹೋಗಿದೆ. ತಮ್ಮ ಅಧಿಕಾರದ ಆಸೆಗೆ ರಾಜ್ಯದ ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೇ, ಭ್ರಷ್ಟಾಚಾರದಲ್ಲಿ ಮುಳುಗಿ ಬೊಕ್ಕಸ ಬರಿದಾಗಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ 11 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನೇ ಅನಾವಶ್ಯಕವಾಗಿ ವೈಜ್ಞಾನಿಕ ಮಾನದಂಡ ಅನುಸರಿಸದೇ ರದ್ದು ಮಾಡಿದೆ.

ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ಹೋಗಿ ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ಹೇಳುವ ಸಿದ್ದರಾಮಯ್ಯ ನವರು, ಪ್ರಚಾರ ಭಾಷಣ ಮುಗಿಸಿ ಮರಳುವ ಹೊತ್ತಿಗೆ ಅನರ್ಹ ಮಾನದಂಡ ಮುಂದಿಟ್ಟು 11 ಲಕ್ಷ ಜನರ ಬಿಪಿಎಲ್ ಕಾರ್ಡ್ ರದ್ದು ಮಾಡಿರುವ ಕ್ರಮದ ತಂತ್ರ-ಕುತಂತ್ರಗಳು ದೇಶದ ಮುಂದೆ ತಮ್ಮ ನಾಟಕವನ್ನು ಬಯಲು ಮಾಡಿವೆ.
ಅನರ್ಹತೆ ಹೆಸರಿನಲ್ಲಿ ನಿಜವಾದ ಬಿಪಿಎಲ್ ಕಾರ್ಡುದಾರರ ಹಕ್ಕನ್ನು ಕಿತ್ತುಕೊಳ್ಳುವುದನ್ನು ನಾನು ಮತ್ತು ನಮ್ಮ ಪಕ್ಷವು ಖಂಡಿಸುತ್ತದೆ.

ಅನರ್ಹರನ್ನು ತಡೆಯುವ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ ದಾರರನ್ನು ಇಳಿಮುಖಗೊಳಿಸಿ ಭಾಗ್ಯ ಯೋಜನೆಗಳಿಗೆ ಹಣ ಹೊಂದಿಸುವ ದುರುದ್ದೇಶ ಈ ಬಿಪಿಎಲ್ ಕಾರ್ಡು ದಾರರ ರದ್ದತಿಯ ಹಿಂದೆ ಅಡಗಿದೆ ಎಂಬುದು ರಾಜ್ಯ ಸರಕಾರದ ನೀತಿ ನಿಲುವುಗಳಿಂದ ತಿಳಿಯುತ್ತಿದೆ.

ಚುನಾವಣಾ ಸಂಧರ್ಭದಲ್ಲಿ ಎಲ್ಲರಿಗೂ ಪ್ರೀ, ಹೆಂಡತಿಗು ಪ್ರೀ, ಕಾಕ ನಿಗು ಪ್ರೀ, ನಿನಗು ಪ್ರೀ ಅವರಿಗೂ ಪ್ರೀ ಎಂದು ಇಷ್ಟುದ್ದ ಭಾಷಣ ಮಾಡುವಾಗ…? ಎಲ್ಲಿತ್ತು ನಿಮ್ಮಷರತ್ತುಗಳು…? ಸಿದ್ದರಾಮಯ್ಯನವರೇ…? ಗೆದ್ದಮೇಲೆ ದಿನಕೊಂದು ಕುಂಟು ನೆಪ ಹೇಳಿ ಬಡವರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ನಿಮ್ಮನಡೆ ಖಂಡನೀಯ. ಅನ್ನಭಾಗ್ಯದ ಹೊರೆ- ಹೊರಲಾಗದೆ ಲಕ್ಷಾಂತರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ತೆರಿಗೆದಾರರಿಗೆ, ಸರಕಾರಿ ನೌಕರರಿಗೆ ಉಚಿತ ಅಕ್ಕಿ ಕೊಡಬೇಕಾ ಎಂದು ಈ ರಾಜ್ಯ ಕಂಡ ಆಡಳಿತಗಾರರ ರೀತಿ ಹೇಳಿಕೆ ಕೊಟ್ಟಿದ್ದಾರೆ.

ಹಾಗಾದರೆ ಶಕ್ತಿ ಗ್ಯಾರೆಂಟಿ ಅಡಿಯಲ್ಲಿ ತೆರಿಗೆದಾರರು, ಸರಕಾರಿ ನೌಕರರು ಉಚಿತ ಬಸ್ಸು ಸೇವೆ ಬಳಸುತ್ತಿಲ್ಲವೇ.. ?ಹಾಗಾದರೆ ಗೃಹಜ್ಯೋತಿ ಗ್ಯಾರೆಂಟಿ ಯೋಜನೆಯಡಿ ತೆರಿಗೆದಾರರು, ಸರಕಾರಿ ನೌಕರರು 200 ಯೂನಿಟ್ ವರೆಗೂ ಉಚಿತ ಕರೆಂಟ್ ಪಡೆಯುತ್ತಿಲ್ಲವೇ…? ಅಥವಾ ಈ ಹೇಳಿಕೆ ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗಳಲ್ಲೂ ಶೀಘ್ರದಲ್ಲೇ ಫಲಾನು ಭವಿಗಳಿಗೆ ಕೊಕ್ ನೀಡಲಾಗುತ್ತದೆ ಎಂಬ ಮುನ್ಸೂಚನೆಯೇ ಇದೇಯ ಎಂದು ಹಲವು ಅನುಮಾನಗಳು ಗೋಚರಿಸುತ್ತಿವೆ.

ಸರಕಾರಕ್ಕೆ ಒಂದು ದೂರದೃಷ್ಟಿ, ಪೂರ್ವಸಿದ್ದತೆ, ಯೋಜನೆ ಇವ್ಯಾವುದೂ ಇಲ್ಲ. ಕೇವಲ ಚುನಾವಣೆಗೆ ಗೆಲ್ಲಲು ಮನಸ್ಸಿಗೆ ಬಂದ ಹಾಗೆ ಕಾಕಾ ಪಾಟೀಲನಿಗೂ ಫ್ರೀ, ಮಹಾದೇವಪ್ಪನಿಗೂ ಫ್ರೀ ಎಂದು ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬಂದಿರುವ ಈ ಕಾಂಗ್ರೆಸ್ ಸರಕಾರಕ್ಕೆ, ಈಗ ಗ್ಯಾರೆಂಟಿಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ.

ನಿಮ್ಮ ಅಧಿಕಾರ ಆಸೆಗೆ ಗ್ಯಾರಂಟಿಗಳ ಯೋಜನೆಯನ್ನು ಮುಂದಿನ ಬಸ್ಸಿನ ಬಾಗಿಲಿಂದ ಬಿಟ್ಟು ಇಂದಿನ ಬಾಗಿಲಿನಿಂದ ಜನರಿಗೆ ಬೆಲೆ ಹೇರಿಕೆಯ ಬಿಸಿ ಯನ್ನು ತಟ್ಟಿಸುತ್ತಿದ್ದಿರಿ.ಇದರಿಂದಾಗಿ ಜನರಿಗೆ ದಿನ ನಿತ್ಯ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ.
ಬಿಪಿಎಲ್ ಕಾರ್ಡು ರದ್ದು ಮಾಡಲು ಹಲವಾರು ದಾರಿ ಹುಡುಕುತ್ತಿರುವ ರಾಜ್ಯ ಸರಕಾರ ಸಣ್ಣ ರೈತರು ಸಹ ಮನೆ ನಿರ್ಮಾಣಕ್ಕೆ ಅಥವಾ ಹೈನುಗಾರಿಕೆಗೆ ಬ್ಯಾಂಕ್ ಅಲ್ಲಿ ಸಾಲ ಸೌಲಭ್ಯ ಪಡೆಯಲು ತೆರಳಿದಾಗ ಬ್ಯಾಂಕ್ ಅಧಿಕಾರಿಗಳು ನೀವು ಅಂದಾಜು ಮೂರು ವರ್ಷಗಳ ತೆರಿಗೆ ಸಂಗ್ರಹ ಮಾಡಿರಬೇಕು ಎಂದು ಹೇಳಿರುತ್ತಾರೆ. ಅದರಂತೆ ಮುಗ್ಧ ಜನರು ಸಾಲ ಪಡೆಯವ ಉದ್ದೇಶದಿಂದ ತೆರಿಗೆಯನ್ನು ಕಟ್ಟಿರುತ್ತಾರೆ ಎಂದು ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button